Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:22 - ಕನ್ನಡ ಸಮಕಾಲಿಕ ಅನುವಾದ

22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:22
14 ತಿಳಿವುಗಳ ಹೋಲಿಕೆ  

ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


“ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ.


ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು.


ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.


ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು