Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:9 - ಕನ್ನಡ ಸಮಕಾಲಿಕ ಅನುವಾದ

9 ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:9
20 ತಿಳಿವುಗಳ ಹೋಲಿಕೆ  

ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.


ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!


ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.


“ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.


ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!


ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು