Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:12 - ಕನ್ನಡ ಸಮಕಾಲಿಕ ಅನುವಾದ

12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:12
21 ತಿಳಿವುಗಳ ಹೋಲಿಕೆ  

ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.


ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.


ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು