Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:15 - ಕನ್ನಡ ಸಮಕಾಲಿಕ ಅನುವಾದ

15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:15
19 ತಿಳಿವುಗಳ ಹೋಲಿಕೆ  

ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು.


ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.


ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.


ಆದ್ದರಿಂದ ಈಜಿಪ್ಟಿನವರು ಇಸ್ರಾಯೇಲರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಾ ಸೇವೆ ಮಾಡಿಸಿಕೊಂಡರು.


ಆಳುತ್ತಿದ್ದ ದುಷ್ಟರ ಕೋಲನ್ನೂ, ಅಧಿಪತಿಗಳ ದಂಡವನ್ನೂ ಯೆಹೋವ ದೇವರು ಮುರಿದುಬಿಟ್ಟರು.


ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.


ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು