Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:18 - ಕನ್ನಡ ಸಮಕಾಲಿಕ ಅನುವಾದ

18 ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:18
18 ತಿಳಿವುಗಳ ಹೋಲಿಕೆ  

ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.


ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.


ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.


ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.


ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.


ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.


ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು