Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:20 - ಕನ್ನಡ ಸಮಕಾಲಿಕ ಅನುವಾದ

20 ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು; ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:20
22 ತಿಳಿವುಗಳ ಹೋಲಿಕೆ  

ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.


ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.


ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.


ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.


ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.


ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?


ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?


ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.


ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.


“ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು