Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:26 - ಕನ್ನಡ ಸಮಕಾಲಿಕ ಅನುವಾದ

26 ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತನ್ನಲ್ಲೇ ಭರವಸವಿಡುವವನು ಮೂಢನು; ಜ್ಞಾನದಿಂದ ನಡೆಯುವವನು ಉದ್ಧಾರವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:26
13 ತಿಳಿವುಗಳ ಹೋಲಿಕೆ  

ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.


ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು