Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:5 - ಕನ್ನಡ ಸಮಕಾಲಿಕ ಅನುವಾದ

5 ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೆಟ್ಟವರು ನ್ಯಾಯವನ್ನು ಗ್ರಹಿಸರು; ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:5
18 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು. ಮೂರ್ಖನು ಇದನ್ನು ಗ್ರಹಿಸನು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.


ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು.


ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ ನಾನು ಹಿರಿಯರಿಗಿಂತಲೂ ವಿವೇಕಿಯಾಗಿದ್ದೇನೆ.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.


ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು