Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:8 - ಕನ್ನಡ ಸಮಕಾಲಿಕ ಅನುವಾದ

8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:8
13 ತಿಳಿವುಗಳ ಹೋಲಿಕೆ  

ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


“ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.


ಅವನು ಕನಿಕರಪಡದೆ ಈ ಕಾರ್ಯವನ್ನು ಮಾಡಿದ್ದರಿಂದ, ಆ ಕುರಿಗೋಸ್ಕರವಾಗಿ ನಾಲ್ಕರಷ್ಟು ತಿರುಗಿ ಕೊಡಬೇಕು,” ಎಂದನು.


ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು.


ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು