Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:24 - ಕನ್ನಡ ಸಮಕಾಲಿಕ ಅನುವಾದ

24 ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು; ಆಣೆಯಿಡುವದನ್ನು ಕೇಳಿದರೂ ಸುಮ್ಮನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:24
11 ತಿಳಿವುಗಳ ಹೋಲಿಕೆ  

“ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.


ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.


ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.


ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು