Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:25 - ಕನ್ನಡ ಸಮಕಾಲಿಕ ಅನುವಾದ

25 ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:25
38 ತಿಳಿವುಗಳ ಹೋಲಿಕೆ  

ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.


“ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.


ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.


“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.


ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.


ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.


ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.


ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು.


ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು