Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:10 - ಕನ್ನಡ ಸಮಕಾಲಿಕ ಅನುವಾದ

10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:10
15 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.


ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.


ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.


ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.


ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.


ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು