Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:18 - ಕನ್ನಡ ಸಮಕಾಲಿಕ ಅನುವಾದ

18 ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:18
11 ತಿಳಿವುಗಳ ಹೋಲಿಕೆ  

ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.


ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.


ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.


ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.


ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು