Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:25 - ಕನ್ನಡ ಸಮಕಾಲಿಕ ಅನುವಾದ

25 ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲಿ ನಾಶನಕ್ಕಾಗಲಿ ಹೆದರಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:25
22 ತಿಳಿವುಗಳ ಹೋಲಿಕೆ  

ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.


ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.


ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.


ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು