Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:5 - ಕನ್ನಡ ಸಮಕಾಲಿಕ ಅನುವಾದ

5 ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:5
24 ತಿಳಿವುಗಳ ಹೋಲಿಕೆ  

ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:


ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.


ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.


ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.


ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು