Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:7 - ಕನ್ನಡ ಸಮಕಾಲಿಕ ಅನುವಾದ

7 ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:7
19 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.


ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.


ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು