Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:8 - ಕನ್ನಡ ಸಮಕಾಲಿಕ ಅನುವಾದ

8 ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಾಯಿಲ್ಲದವರಿಗೂ ಹಾಳಾಗಿಹೋಗುತ್ತಿರುವವರೆಲ್ಲರಿಗೂ ನ್ಯಾಯವಾಗುವಂತೆ ಬಾಯಿ ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:8
18 ತಿಳಿವುಗಳ ಹೋಲಿಕೆ  

ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.


ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ. ನಿಮ್ಮ ಮಹಾಶಕ್ತಿಯ ಪ್ರಕಾರ ಸಾಯುವುದಕ್ಕಿರುವವರನ್ನು ಕಾಪಾಡಿರಿ.


ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು.


ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.


ಪ್ರಧಾನರು ನುಡಿಗಳನ್ನು ಬಿಗಿ ಹಿಡಿದು, ತಮ್ಮ ಬಾಯಿಯ ಮೇಲೆ ಕೈ ಇಟ್ಟುಕೊಳ್ಳುತ್ತಿದ್ದರು.


ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.


ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.


ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು