Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:13 - ಕನ್ನಡ ಸಮಕಾಲಿಕ ಅನುವಾದ

13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:13
20 ತಿಳಿವುಗಳ ಹೋಲಿಕೆ  

ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ, ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು. ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ, ಹೌದು, ನನ್ನ ಹೆತ್ತವಳ ಕೋಣೆಗೆ ಅವನನ್ನು ಬಿಡದೆ ಕರೆದುಕೊಂಡು ಹೋದೆನು.


ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.


ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.


ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.


ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.


ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು