Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:16 - ಕನ್ನಡ ಸಮಕಾಲಿಕ ಅನುವಾದ

16 ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:16
13 ತಿಳಿವುಗಳ ಹೋಲಿಕೆ  

ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.


ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.


“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.


ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು