Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:14 - ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಕೆಡುಕ. ಎಲ್ಲಾ ಸಮಯಗಳಲ್ಲಿ ಅವನು ಕೆಡುಕನ್ನೇ ಆಲೋಚಿಸುತ್ತಾನೆ; ಎಲ್ಲೆಲ್ಲೂ ತೊಂದರೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:14
22 ತಿಳಿವುಗಳ ಹೋಲಿಕೆ  

ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.


ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.


ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.


ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ.


ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.


ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.


ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.


ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.


ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.


ಕೇಡನ್ನು ಕಲ್ಪಿಸುವವನು ಕುಚೋದ್ಯಗಾರನೆಂದು ಕರೆಯಲ್ಪಡುವನು.


ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.


ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.


ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು