Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:32 - ಕನ್ನಡ ಸಮಕಾಲಿಕ ಅನುವಾದ

32 ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:32
25 ತಿಳಿವುಗಳ ಹೋಲಿಕೆ  

ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.


ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?


ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ.


“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು.


ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.


ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.


ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.


ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು