Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:6 - ಕನ್ನಡ ಸಮಕಾಲಿಕ ಅನುವಾದ

6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:6
24 ತಿಳಿವುಗಳ ಹೋಲಿಕೆ  

ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.


ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.


ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?


ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.


ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.


“ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.


ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.


ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.


ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು.


ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?


ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.


ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


ಮಗನೇ, ಕೇಳಿ ಜ್ಞಾನವಂತನಾಗು; ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು.


“ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ:


ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.


ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು