Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:7 - ಕನ್ನಡ ಸಮಕಾಲಿಕ ಅನುವಾದ

7 ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:7
24 ತಿಳಿವುಗಳ ಹೋಲಿಕೆ  

ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.


“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,


“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,


ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.


ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.


ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.


ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.


ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.


ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.


ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.


ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು.


ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು