Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:1 - ಕನ್ನಡ ಸಮಕಾಲಿಕ ಅನುವಾದ

1 ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜ್ಞಾನವೆಂಬಾಕೆ ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:1
17 ತಿಳಿವುಗಳ ಹೋಲಿಕೆ  

ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು.


ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ. ತಿಳುವಳಿಕೆಯಿಂದ ಅದು ಸ್ಥಿರಗೊಳ್ಳುತ್ತದೆ.


ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.


ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು