Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:2 - ಕನ್ನಡ ಸಮಕಾಲಿಕ ಅನುವಾದ

2 ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹೆ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಚ್ಯಾ ಬರೊಸ್ಯಾಚ್ಯಾ ವರ್‍ತಿ ಹೊಂದುನ್ ಹಾಯ್, ದೆವ್ ಕನ್ನಾಬಿ ಝುಟೆ ಬೊಲಿನಾ, ತೆನಿ ಅಮ್ಚ್ಯಾ ವಾಂಗ್ಡಾ ಹ್ಯಾ ಜಿವನಾಚ್ಯಾ ವಿಶಯಾತ್ ಎಳ್ಕಾಲ್ ಚಾಲು ಹೊವ್ಚ್ಯಾ ಅದ್ದಿಚ್ ಗೊಸ್ಟ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:2
46 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ,


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.


ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.


ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು