Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:5 - ಕನ್ನಡ ಸಮಕಾಲಿಕ ಅನುವಾದ

5 ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:5
18 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ


ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.


ಆದರೆ ಎಲ್ಲವನ್ನೂ ಯೋಗ್ಯವಾಗಿಯೂ ಕ್ರಮವಾಗಿಯೂ ಮಾಡಿರಿ.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.


ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.


ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ, ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರಬೇಕಾದದ್ದನ್ನು ಅವರು ನನಗೆ ತಿಳಿಸಲಿ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟುವವರೆಗೆ, ಈ ವಾದ್ಯಗಾರರು ಸಭೆಯ ಗುಡಾರದ ನಿವಾಸದ ಮುಂದೆ ಸೇವಿಸುತ್ತಾ ಇದ್ದರು. ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.


ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.


ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.


“ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.


ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು