Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:7 - ಕನ್ನಡ ಸಮಕಾಲಿಕ ಅನುವಾದ

7 ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾ ಕಾಮಾತ್ನಿ ತಿಯಾ ತುಜ್ಯಾ ಯೆವ್ಡ್ಯಾಕ್ ದುಸ್ರ್ಯಾಕ್ನಿ ಎಕ್ ಬರ್‍ಯಾ ಚಾಲಿಚೊ ಉದಾರನ್ ಹೊವ್ನ್ ರ್‍ಹಾವ್ಚೆ. ತುಜ್ಯಾ ಶಿಕ್ವುತಲ್ಯಾ ಕಾಮಾತ್ ನಿಯತ್ತಿಚೊ ಅನಿ ಗಂಬಿರ್ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:7
12 ತಿಳಿವುಗಳ ಹೋಲಿಕೆ  

ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.


ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು