Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:14 - ಕನ್ನಡ ಸಮಕಾಲಿಕ ಅನುವಾದ

14 ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚಿ ಲೊಕಾ ಅಪ್ಲೊ ಸಗ್ಳೊ ಜಿವನ್ ಬಿ ದುಸ್ರ್ಯಾಂಚ್ಯಾ ಸಾಟ್ನಿ ಕಾಡುನ್ ಥವ್ತಲ್ಯಾತುಚ್ ಕಳ್ದುಕ್ ಶಿಕುಂದಿತ್. ಹೆಚ್ಯಾ ವೈನಾ ಕೊನಾಕ್ ಖರೆಚ್ ಗರಜ್ ಹಾಯ್ ತೆ ಪುರಾ ಹೊಂವ್ದಿತ್. ಅನಿ ತೆನಿ ಅಪ್ಲ್ಯಾ ಫಾಯ್ದ್ಯಾಕ್ ನಸಲ್ಲ್ಯಾಂಚ್ಯಾ ಸರ್ಕೆ ಕರಿಸ್ತಾನಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:14
21 ತಿಳಿವುಗಳ ಹೋಲಿಕೆ  

ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.


ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.


ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು