Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:19 - ಕನ್ನಡ ಸಮಕಾಲಿಕ ಅನುವಾದ

19 ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾಜನು ಅವರ ಸಂಗಡ ಮಾತಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ, ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದ್ದರಿಂದ ಆ ನಾಲ್ಕು ಜನ ಯುವಕರು ರಾಜನ ಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:19
11 ತಿಳಿವುಗಳ ಹೋಲಿಕೆ  

ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.


ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.


ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.


ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.


ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.


ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.


ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.


ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು