Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:2
30 ತಿಳಿವುಗಳ ಹೋಲಿಕೆ  

ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.


ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.


ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.


ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.


ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.


ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.


ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು