Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:6 - ಕನ್ನಡ ಸಮಕಾಲಿಕ ಅನುವಾದ

6 ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಆರಿಸಿಕೊಂಡ ಯುವಕರಲ್ಲಿ ದಾನಿಯೇಲನು, ಹನನ್ಯನು, ಮಿಶಾಯೇಲನು, ಅಜರ್ಯನು ಎಂಬ ಯೆಹೂದ್ಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ತರುಣರಲ್ಲಿ ಯೆಹೂದ ಕುಲಕ್ಕೆ ಸೇರಿದವರಾದ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:6
10 ತಿಳಿವುಗಳ ಹೋಲಿಕೆ  

ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.


ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.


ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.


ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.


ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?


ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು