Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:7 - ಕನ್ನಡ ಸಮಕಾಲಿಕ ಅನುವಾದ

7 ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್‍ನೆಗೋ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:7
13 ತಿಳಿವುಗಳ ಹೋಲಿಕೆ  

ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.


ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ


ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.


ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.


ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು