Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:9 - ಕನ್ನಡ ಸಮಕಾಲಿಕ ಅನುವಾದ

9 ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:9
14 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.


ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು.


ಕಂಚುಕಿಯ ಯಜಮಾನನು ದಾನಿಯೇಲನಿಗೆ, “ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯ ಅರಸನಿಗೆ ನಾನು ಭಯಪಡುತ್ತೇನೆ. ಏಕೆಂದರೆ ಅರಸನು ಏಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಇತರ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು. ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ?” ಎಂದನು.


ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು