Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:1 - ಕನ್ನಡ ಸಮಕಾಲಿಕ ಅನುವಾದ

1 ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:1
28 ತಿಳಿವುಗಳ ಹೋಲಿಕೆ  

“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.


ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.


ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.


ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.


ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು.


ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.


ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,


ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.


ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.


ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.


ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.


ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು