Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:3 - ಕನ್ನಡ ಸಮಕಾಲಿಕ ಅನುವಾದ

3 ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:3
11 ತಿಳಿವುಗಳ ಹೋಲಿಕೆ  

ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


ಬೆಳ್ಳಿಯನ್ನು ಸುಲಿದುಕೊಳ್ಳಿರಿ; ಬಂಗಾರವನ್ನು ಸುಲಿದುಕೊಳ್ಳಿರಿ. ಕೂಡಿಸಿಟ್ಟ ಧನಕ್ಕೂ, ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.


ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.


ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು.


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.


ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು