Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:11 - ಕನ್ನಡ ಸಮಕಾಲಿಕ ಅನುವಾದ

11 ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು. ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲವು ದಕ್ಷಿಣರಾಜನ ಕೈವಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು; ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲಾ ದಕ್ಷಿಣರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:11
13 ತಿಳಿವುಗಳ ಹೋಲಿಕೆ  

ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.


ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.


ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.


ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.


ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು