Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:12 - ಕನ್ನಡ ಸಮಕಾಲಿಕ ಅನುವಾದ

12 ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:12
19 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.


ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.


ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.


ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.


ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು