Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:16
11 ತಿಳಿವುಗಳ ಹೋಲಿಕೆ  

ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು.


ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.


ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.


ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು