Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:27 - ಕನ್ನಡ ಸಮಕಾಲಿಕ ಅನುವಾದ

27 ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:27
24 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.


ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.


ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.


ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.


ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.


“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.


ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು