Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅನಂತರ ಉತ್ತರರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು; ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವದು; ಅವನು ಮಾಡುವಷ್ಟು ಮಾಡಿ ಮತ್ತೆ ಸ್ವದೇಶವನ್ನು ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:28
7 ತಿಳಿವುಗಳ ಹೋಲಿಕೆ  

ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.


ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.


ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.


ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.


ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.


ಪ್ರತಿದಿನ ಯಜ್ಞದ ಸಂಗಡ ಯೆಹೋವ ದೇವರ ಸೈನ್ಯವೂ ಸಹ ಅಪರಾಧದ ನಿಮಿತ್ತವಾಗಿ ಅದಕ್ಕೆ ಕೊಡಲಾಯಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ, ಇಷ್ಟಾರ್ಥವನ್ನು ಪೂರೈಸಿಕೊಂಡು ಅನುಕೂಲ ಪಡೆಯಿತು, ವೃದ್ಧಿಗೆ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು