Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:31 - ಕನ್ನಡ ಸಮಕಾಲಿಕ ಅನುವಾದ

31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:31
18 ತಿಳಿವುಗಳ ಹೋಲಿಕೆ  

“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


“ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”


ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.


ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.


ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.


ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು