Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:34 - ಕನ್ನಡ ಸಮಕಾಲಿಕ ಅನುವಾದ

34 ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆಮೇಲೆ ಬಹುಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ಜ್ಞಾನಿಗಳಾದ ಯೆಹೂದ್ಯರು ಶಿಕ್ಷೆಗೊಳಗಾದಾಗ ಅವರಿಗೆ ಸ್ವಲ್ಪ ಸಹಾಯ ಸಿಕ್ಕುವದು. ಆದರೆ ಜ್ಞಾನಿಗಳಾದ ಆ ಯೆಹೂದ್ಯರನ್ನು ಸೇರಿಕೊಳ್ಳುವ ಅನೇಕ ಯೆಹೂದ್ಯರು ಕಪಟಿಗಳಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:34
22 ತಿಳಿವುಗಳ ಹೋಲಿಕೆ  

ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು