Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:36 - ಕನ್ನಡ ಸಮಕಾಲಿಕ ಅನುವಾದ

36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:36
47 ತಿಳಿವುಗಳ ಹೋಲಿಕೆ  

ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ, “ನಾನು ಆಕಾಶಕ್ಕೆ ಏರಿ, ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು. ಉತ್ತರ ದಿಕ್ಕಿನ ಕಡೆಗಿರುವ ಜಫೋನ್ ಪರ್ವತದ ಮೇಲೆಯೂ ನಾನು ಆಸೀನನಾಗುವೆನು.


ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.


ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.


“ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು.


ಉನ್ನತವಾದ ಮೇಘ ಮಂಡಲದ ಮೇಲೆ ಏರಿ, ಮಹೋನ್ನತರಿಗೆ ಸಮಾನನಾಗುವೆನು.”


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು