Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:38 - ಕನ್ನಡ ಸಮಕಾಲಿಕ ಅನುವಾದ

38 ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪಿತೃಗಳಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯವಸ್ತುಗಳಿಂದಲೂ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:38
8 ತಿಳಿವುಗಳ ಹೋಲಿಕೆ  

ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,


ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.


ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.


ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು