Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:18 - ಕನ್ನಡ ಸಮಕಾಲಿಕ ಅನುವಾದ

18 ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:18
22 ತಿಳಿವುಗಳ ಹೋಲಿಕೆ  

‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.


“ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.


ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.


ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”


ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.


ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.


ಪರಲೋಕದ ದೇವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು