Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:31 - ಕನ್ನಡ ಸಮಕಾಲಿಕ ಅನುವಾದ

31 “ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ರಾಜರೇ ಕೇಳಿ, ತಾವು ಕಂಡದ್ದು ಒಂದು ಅದ್ಭುತ ಪ್ರತಿಮೆ. ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆ ನಿಮ್ಮೆದುರಿಗೆ ನಿಂತಿತ್ತು. ಭಯಂಕರವಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ರಾಜನೇ, ನೀನು ಕಂಡದು ಆಹಾ, ಅದ್ಭುತ ಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಅರಸನೇ, ನಿನ್ನ ಕನಸಿನಲ್ಲಿ ನಿನ್ನ ಎದುರಿಗೆ ಒಂದು ದೊಡ್ಡ ಪ್ರತಿಮೆಯನ್ನು ಕಂಡೆ. ಅದು ಬಹಳ ದೊಡ್ಡದಾಗಿಯೂ ಪ್ರಕಾಶಮಾನವಾಗಿಯೂ ಪ್ರಭಾವಶಾಲಿಯಾಗಿಯೂ ಇತ್ತು. ನೋಡಿದವರು ಆಶ್ಚರ್ಯಚಕಿತರಾಗಿ ಕಣ್ಣರಳಿಸುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:31
11 ತಿಳಿವುಗಳ ಹೋಲಿಕೆ  

ಅವರು ಭಯಂಕರವಾದವರು ಮತ್ತು ಕ್ರೂರವಾದವರು. ಅವರು ತಮಗೆ ತಾವೇ ಕಾನೂನಾಗಿದ್ದಾರೆ. ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ.


ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.


ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.


ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.


ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,


ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.


“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.


ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು