Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:37 - ಕನ್ನಡ ಸಮಕಾಲಿಕ ಅನುವಾದ

37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:37
32 ತಿಳಿವುಗಳ ಹೋಲಿಕೆ  

“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, ವಂದನೆಗಳು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.


“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.


ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”


ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?


ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು.


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


“ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು