Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:40 - ಕನ್ನಡ ಸಮಕಾಲಿಕ ಅನುವಾದ

40 ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾಲ್ಕನೆಯ ರಾಜ್ಯ ಕಬ್ಬಿಣದಷ್ಟು ಗಟ್ಟಿಗೆ ಕಬ್ಬಿಣ ಎಲ್ಲ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದೆ. ಅಂತೆಯೇ ಅದು ಎಲ್ಲವನ್ನು ಚೂರುಚೂರಾಗಿಸಿ ಧ್ವಂಸ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದಷ್ಟೆ; ಸಕಲವನ್ನೂ ದ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ದ್ವಂಸಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:40
12 ತಿಳಿವುಗಳ ಹೋಲಿಕೆ  

“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.


ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.


ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.


ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ಕಂಚನ್ನು ಮುರಿಯುವುದು ಯಾರಿಂದಾದೀತು? ಎಂದು ಹೇಳಿದನು.


ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.


“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.


ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು