Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:41 - ಕನ್ನಡ ಸಮಕಾಲಿಕ ಅನುವಾದ

41 ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಪಾದಗಳಲ್ಲಿ ಹಾಗು ಪಾದಬೆರಳುಗಳಲ್ಲಿ ಒಂದು ಅಂಶ ಕಬ್ಬಿಣ ಮತ್ತೊಂದು ಅಂಶ ಮಣ್ಣು ಆಗಿದ್ದನ್ನು ನೀವು ನೋಡಿದಿರಿ. ಅಂತೆಯೇ ಆ ರಾಜ್ಯವು ಭಿನ್ನಭಿನ್ನವಾಗಿರುವುದು. ಜೇಡಿಮಣ್ಣಿನೊಂದಿಗೆ ಕಬ್ಬಿಣ ಮಿಶ್ರವಾಗಿದ್ದನ್ನು ನೀವು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲ ಸೇರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹೆಜ್ಜೆಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ ಒಂದಂಶವು ಕಬ್ಬಿಣವೂ ಆಗಿದ್ದದ್ದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನಭಿನ್ನವಾಗಿರುವದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ವಿುಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:41
8 ತಿಳಿವುಗಳ ಹೋಲಿಕೆ  

“ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.


“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.


ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.


ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು