Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:47 - ಕನ್ನಡ ಸಮಕಾಲಿಕ ಅನುವಾದ

47 ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:47
34 ತಿಳಿವುಗಳ ಹೋಲಿಕೆ  

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.


ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.


ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,


ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.


“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.


ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.


“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.


ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.


ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.


ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.


ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.


ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು